ವಚನ - 544     
 
ಜ್ಞಾನಿಗಳು ತಾವಾದ ಬಳಿಕ ಅನ್ಯರ ಹಂಗಿನೊಳಗಾಗಬಾರದು. ಜ್ಞಾನಿಗಳು ತಾವಾದ ಬಳಿಕ ಅನ್ಯರ ಕುಲವ ಬೆರಸಬಾರದು. ಜ್ಞಾನಿಗಳು ತಾವಾದ ಬಳಿಕ ಅಸತ್ಯವ ನುಡಿಯಬಾರದು ಕಪಿಲಸಿದ್ಧಮಲ್ಲಿಕಾರ್ಜುನಾ.