ವಚನ - 586     
 
ತನುವಿನ ಕ್ರಿಯಾಕಾರದಲ್ಲಿ ಒಡಲುಗೊಂಡಿಹವರು ಉಣ್ಣೆನೆಂದಡೆ ಅವರ ವಶವೆ? ತನುಗುಣ ನಾಸ್ತಿಯಾದವರು ಉಣ್ಣೆನೆಂದಡೆ ಸಲುವುದಲ್ಲದೆ ಕಾಮವಿಕಾರಕ್ಕೆ ಸಂದು, ತಾಮಸಕ್ಕೆ ಮೈಗೊಟ್ಟು ಇಪ್ಪವರೆಲ್ಲರೂ ಉಣ್ಣೆನೆಂದಡೆ ಹರಿವುದೆ? ನಿಜಗುರು ನಿಜಲಿಂಗ ನಿಜಜಂಗಮ ನಿತ್ಯಪ್ರಸಾದವ ಶ್ರೀಗುರು ಕರುಣದಿಂದ ಪಡೆದು ಅರಿದಾಚರಿಸಿದವರಿಗಲ್ಲದೆ ಭವವ ತಪ್ಪಿಸಬಾರದು ಕಾಣಾ ಪ್ರಭುವೆ, ಕಪಿಲಸಿದ್ಧಮಲ್ಲಿಕಾರ್ಜುನಾ.