ವಚನ - 630     
 
ದಿಟ್ಟಲಿಂಗವ ತನ್ನ ಇಷ್ಟ ಕರಸ್ಥಲದಲ್ಲಿಟ್ಟು ಬಟ್ಟೆಗಟ್ಟಿದನೆರಡು ದೆಸೆದೆಸೆಗಾಗಿ, ಅವ್ವ ನೀನೊಳಗಾಗಿ ಸೀಮೆ ಸಾಯುಜ್ಯದಲ್ಲಿ ಸೊಲ್ಲನಿಟ್ಟಾತ ಗುರುವವ್ವಾ ಕಪಿಲಸಿದ್ಧಮಲ್ಲಿಕಾರ್ಜುನಾ.