ವಚನ - 664     
 
ನಟ್ಟಡವಿಯೊಳಗೆ ಇರುಳು-ಹಗಲೆನ್ನದೆ ಅಪ್ಪಾ! ಅಯ್ಯಾ! ಎಂದು ನಾನರಸುತ್ತ ಹೋದಡೆ, `ನಾನಿದ್ದೇನೆ ಬಾ ಮಗನೆ' ಎಂದು ಕರೆದು, ಎನ್ನ ಕಂಬನಿದೊಡೆದು, ತನ್ನ ನಿಜವ ತೋರಿದ ಪಾದವಿಂದೆನ್ನಲ್ಲಿಗೆ ನಡೆದುಬಂದಡೆ ನಾನರಿಯದೆ ಮರುಳುಗೊಂಡೆಹೆನೆಂದು ಎನ್ನ ಮನದೊಳಗೆಚ್ಚರ ಮಾಡಿದೆ. ಆತನನರಸಿಕೊಂಡು ಬಂದೆನ್ನ ಹೃದಯದಲಿಂಬಿಟ್ಟುಕೊಂಬೆ, ಎನ್ನ ಕಪಿಲಸಿದ್ಧಮಲ್ಲಿಕಾರ್ಜುನನ.