ವಚನ - 751     
 
ಪರಿಭವಕ್ಕೆ ಬಪ್ಪ ಪರಮಾಣು ನೀನಲ್ಲ. ಕುರುಹಿಂಗೆ ಬಂದ ಸೀಮ ನೀನಲ್ಲ. ಏಕಯ್ಯ ನಿನಗೆ ಪ್ರಾಪಂಚಿಕವು? ಆನಂದಮಧ್ಯದಲಿ ಅಪರವಾಗಿ, ಅಪರಮಧ್ಯದಲಿ ಪೂರ್ವನಾಗಿ ಆ ಪೂರ್ವಕ್ಕೆ ಒಡೆಯ ನೀನೆಯಾಗಿಪ್ಪೆ. ಆರಯ್ಯಾ ಬಲ್ಲರು ನಿನ್ನ ಪರಿಯ? ಶರಣಸತಿ ಲಿಂಗಪತಿಯಾಗಿದ್ದವರು ಬಲ್ಲರು. ಏಕಲಿಂಗನಿಷ್ಠಾಪರರು ಅವರು ಬಲ್ಲರು. ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ಏಕಯ್ಯಾ, ಓಡಿದೆಯೆಂದು ನಂಬುಗೆಗೊಡುವಂತೆ ಕರಂಗೊಟ್ಟರು.