ವಚನ - 884     
 
ಮಾಡಿ ಮಾಡಿ ನಿತ್ಯ ಲಿಂಗಾರ್ಚನೆಯ, ಮಾಡಿ ಮಾಡಿ ನಿತ್ಯ ಜಂಗಮಾರ್ಚನೆಯ, ಮಾಡಿ ಮಾಡಿ ವಿಸ್ತಾರವೆಂದು ಮಾಡಿ ಕೂಡಿದವರೆಲ್ಲ ನಿತ್ಯರಾದರು. ಮಾಡದೆ ಕೂಡದೆ ಯೋಗವೆಂದು, ಆತ್ಮಬೋಧೆಯೆಂದು, ಯೋಗಿಗಳ ಅನುಮತವೆಂದು, ಅಧ್ಯಾತ್ಮವ ನುಡಿದು ಶಿವಪೂಜೆಗೆ ದೂರವಾಗಬೇಡ. ಅಲ್ಲದೆ, ಕೆಲವರೊಳಗೆ ಆಡಿ ಕಪಿಲಸಿದ್ಧಮಲ್ಲಿಕಾರ್ಜುನನ ಚಿತ್ತಕ್ಕೆ ದೂರವಾಗದೆ ಶಿವಾರ್ಚನೆಯ ಮಾಡಿದಡೆ ದಿವ್ಯಯೋಗಿಯಪ್ಪೆ.