ವಚನ - 941     
 
ಯುಗ ಜುಗ ಮಡಿವಂದು ಧಗಿಲು ಭುಗಿಲೆಂದು ಮುಸುಕಿದ ಮಹಾಜ್ವಾಲೆ ಇದೇನೊ! ಇಂದೆನ್ನ ಕಣ್ಗೆ ಗೋಚರವಾಯಿತ್ತೆಲೆ ಅಯ್ಯಾ! ನೀವೆಂದರಿಯೆನಯ್ಯಾ. ನಾನೆನ್ನ ಕಾಯದ ಕಳವಳದಲ್ಲಿದ್ದೆನಲ್ಲದೆ ನೀವೆಂಬ ಬಗೆದೋರದೆ ಕೆಟ್ಟೆನೆಲೆ ಅಯ್ಯಾ. ಆಳ್ದನೊಡನೆ ಆಳು ಮುನಿದಡೆ, ಆರು ಕೆಡುವರು ಹೇಳಾ, ಕಪಿಲಸಿದ್ಧಮಲ್ಲಿಕಾರ್ಜುನಾ.