ವಚನ - 952     
 
ರುಚಿಯನತಿ ರುಚಿಸಿದಲ್ಲಿ ವಿಷವಾಯಿತ್ತು ; ರುಚಿಯು ನಿಜಶಕ್ತಿಯಂತಿರಲು ಅಮೃತವಾಯಿತ್ತು. ಇದು ಕಾರಣ, ಗುರುಭಕ್ತರಿಗೆ ಗುರುಕರುಣವೆ ಸಾಕು; ಅನ್ಯರ ಅನುಭವ, ಅನ್ಯರ ಸಮರಸ ಕಪಿಲಸಿದ್ಧಮಲ್ಲಿಕಾರ್ಜುನನ ಶರಣನಿಗನಿಷ್ಟ ಕೇಳಾ, ಮಡಿವಾಳಯ್ಯಾ.