ವಚನ - 962     
 
ಲಿಂಗವಾದಡೆ ಚೆನ್ನಬಸವಣ್ಣನಂತಾಗಬೇಕಯ್ಯಾ; ವೀರನಾದಡೆ ಮಡಿವಾಳಯ್ಯನಂತಾಗಬೇಕಯ್ಯ; ನಿಗ್ರಹಿಯಾದಡೆ ಹೊಡೆಹುಲ್ಲ ಬಂಕಯ್ಯನಂತಾಗಬೇಕಯ್ಯ; ಧೀರನಾದಡೆ ಘಟ್ಟಿವಾಳಯ್ಯನಂತಾಗಬೇಕಯ್ಯ; ಲಿಂಗದಲ್ಲಿ ನಿರ್ವಯಲಾದಡೆ ನೀಲಲೋಚನೆಯಮ್ಮನಂತಾಗಬೇಕಯ್ಯ. ಈ ಐವರ ಕಾರುಣ್ಯಪ್ರಸಾದವ ಕೊಂಡು ಬದುಕಿದೆನಯ್ಯ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.