ವಚನ - 136     
 
ಕಟ್ಟಿದ ಕೆರೆಗೆ ಕೋಡಿ ಮಾಣದು. ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯಾ? ಅರುಹಿರಿಯರೆಲ್ಲ ವೃಥಾ ಕೆಟ್ಟು ಹೋದರಿನ್ನೆಂತಯ್ಯಾ? ಚೆನ್ನಮಲ್ಲಿಕಾರ್ಜುನದೇವರಿಗೋತು ಮುಟ್ಟಿದವರೆಲ್ಲಾ ನಿಶ್ಚಿಂತರಾದರು.