ವಚನ - 1138     
 
ಹಿರಣ್ಯದಿಚ್ಛೆಯಲಿ ಹೆಚ್ಚಿ ನುಡಿವರು ನಿನ್ನಂಗವಪ್ಪರೆ ಅಯ್ಯಾ? ಅಪ್ಪರಪ್ಪರು ಹೊನ್ನು ಹೆಣ್ಣು ಮಣ್ಣು ತ್ರಿವಿಧವ ಬಿಟ್ಟವರು. ಅಪ್ಪರಪ್ಪರು ಸತ್ಪಾತ್ರ-ಅಪಾತ್ರವೆಂದರಿದವರು. ಅಪ್ಪರಪ್ಪರು ಸದಾಚಾರ, ನಿಹಿತಾಚಾರ, ಗುರುಚರಭಕ್ತಿ, ಸ್ವಾನುಭಾವದೀಕ್ಷೆ ಸಮನಿಸಿದವರು. ನಿನ್ನಂಗ ಎಲ್ಲರಂತಲ್ಲ ಹೊಸ ಪರಿ ಎಲೆ ಅಯ್ಯಾ. ಮಸ್ತಕದಲ್ಲಿ ಪೂಜೆಯ ಮಾಡಿ ಅದ ನಿರ್ಮಾಲ್ಯವೆಂದು ತ್ಯಜಿಸಿ, ಮರಳಿ ಪಡೆದು ನಿನಗೆ ಪಾತ್ರವಾದರು. ಅಪ್ಪುದಕ್ಕನುಮಾನವೆ? ಕಪಿಲಸಿದ್ಧಮಲ್ಲಿಕಾರ್ಜುನಾ.