ವಚನ - 1304     
 
ಆಜ್ಞಾಸಿದ್ಧನನರ್ಚಿಸುವಲ್ಲಿ ಆರಯ್ಯಾ ಬಲ್ಲವರು, ಚೆನ್ನಬಸವಣ್ಣನಲ್ಲದೆ? ಮೂರ್ತಿಯೆಂಟು ಆಗದ ಮುನ್ನ ಮುಖಲಿಂಗವಾಗಿರ್ದ ಸುದ್ದಿಯನಾರಯ್ಯ ಬಲ್ಲವರು, ಚೆನ್ನಬಸವಣ್ಣನಲ್ಲದೆ? ಸದಮಲಜ್ಞಾನದಲ್ಲಿ ಒಪ್ಪಿಪ್ಪ ಅಕ್ಷರದ್ವಯದ ಭೇದಾದಿ ಭೇದವ ಭೇದಿಸಿ ಲೋಕಕ್ಕೆ ಭಕ್ತಿಯ ಸಾಧಿಸಿಕೊಟ್ಟು ಲೋಕಕ್ಕೆ ಉರುತರ ಗುರುವಾದ ಕಾರಣ ಚೆನ್ನಬಸವಣ್ಣನೈ, ಕಪಿಲಸಿದ್ಧಮಲ್ಲಿಕಾರ್ಜುನಾ.