ವಚನ - 1313     
 
ಬ್ರಹ್ಮನಾದಡಾಗಲಿ, ವಿಷ್ಣುವಾದಡಾಗಲಿ, ಇಂದ್ರನಾದಡಾಗಲಿ, ಚಂದ್ರನಾದಡಾಗಲಿ, ಎಮ್ಮ ಶಿವಶರಣರ ನೋವು ಎನ್ನ ನೋವು ನೋಡಾ. `ಅವರನೊರಸುವೆನುರುಹುವೆ'ಯೆಂದು ಕಪಿಲಸಿದ್ಧಮಲ್ಲಿಕಾರ್ಜುನ ತನ್ನ ನೊಸಲ ಕಣ್ಣಿಂಗೆ ಬೆಸನನಿತ್ತಡೆ, ನಿಲಬಲ್ಲ ಗರುವರನಾರನೂ ಕಾಣೆ.