ವಚನ - 171     
 
ಕುಲಮದವೆಂಬುದಿಲ್ಲ ಅಯೋನಿಸಂಭವನಾಗಿ, ಛಲಮದವೆಂಬುದಿಲ್ಲ ಪ್ರತಿದೋರನಾಗಿ, ಧನಮದವೆಂಬುದಿಲ್ಲ ತ್ರಿಕರಣ ಶುದ್ಧನಾಗಿ, ವಿದ್ಯಾಮದವೆಂಬುದಿಲ್ಲ ಅಸಾಧ್ಯವ ಸಾಧಿಸಿದನಾಗಿ. ಮತ್ತಾವ ಮದವೆಂಬುದಿಲ್ಲ ನೀನವಗ್ರಹಿಸಿದ ಕಾರಣ, ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣನು ಅಕಾಯ ಚರಿತ್ರನಾಗಿ.