ವಚನ - 1351     
 
ಕಾಯ ಸೊನೆಯರತಲ್ಲದೆ ಹಣ್ಣಿನ ರಸ ಚಿಹ್ನದೋರದು. ಕಾಯ ಕರ್ಮವ ಮಾಡಿ, ಜೀವ ಜ್ಞಾನವನರಿದು, ತ್ರಿವಿಧಭಾವ ಶುದ್ಧಿಯಾದಲ್ಲದೆ ಮೇಲೆ ಕಾಣಲಿಲ್ಲ, ಕಪಿಲಸಿದ್ಧಮಲ್ಲಿಕಾರ್ಜುನ ಲಿಂಗವ.