ವಚನ - 1368     
 
ಅಯ್ಯಾ, ನಿಮ್ಮ ಶರಣವುಂಡ ಸಬುದವೆನ್ನ ಮನಕ್ಕೆ ವೇದ್ಯವಾಯಿತ್ತು. ನಿಮ್ಮ ನಿಜವುಂಡ ನಿಲವು ಎನ್ನ ಮತಿಗೆ ವೇದ್ಯವಾಯಿತ್ತು. ನಿಮ್ಮ ಕರುಣಪ್ರಸಾದವೆನ್ನ ಸರ್ವಾಂಗವೇದ್ಯವಾಯಿತ್ತು. ನಿಮ್ಮ ಕಾಯವಿಡಿದಿಪ್ಪ ಕರಸ್ಥಲದ ಕಾರಣವ ಹೇಳಾ, ಕಪಿಲಸಿದ್ಧಮಲ್ಲಿನಾಥಾ.