ವಚನ - 1425     
 
ಇಂತೀ ಭಕ್ತಸ್ಥಲದ ವರ್ಮವನು ಲೋಕಕ್ಕೆ ನಿಶ್ಚಿಂತವ ಮಾಡಿ ತೋರಿದ, ತನ್ನ ಪದದುನ್ನತವ ಏಕೈಕಸದ್ಭಾವರಿಗಿತ್ತ, ಎನ್ನ ಗುರು ಚೆನ್ನಬಸವಣ್ಣನು. ಬಸವಣ್ಣ ಚೆನ್ನಬಸವಣ್ಣನೆಂಬ ಮಹಾಸಮುದ್ರದೊಳಗೆ ಹರುಷಿತನಾದೆನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.