ವಚನ - 1434     
 
ಸಿದ್ಧಾಂತಿಯ ಜ್ಞಾನ ಸಾಧನೆಯಲ್ಲಿ ಹೋಯಿತ್ತು. ವೇದಾಂತಿಯ ಜ್ಞಾನ ವಾದದಲ್ಲಿ ಹೋಯಿತ್ತು. ಕ್ರಿಯಾವಂತನ ಜ್ಞಾನ ನುಡಿಯಲ್ಲಿ ಹೋಯಿತ್ತು. ವ್ಯವಹಾರಿಕನ ಜ್ಞಾನ ದ್ರವ್ಯಾರ್ಜನೆಯಲ್ಲಿ ಹೋಯಿತ್ತು. ಇವೆಲ್ಲ ಭವಕ್ಕೆ ಕಾರಣವಲ್ಲದೆ, ಭವರಹಿತ ಜ್ಞಾನವು ಸಾಧ್ಯವಾಗುವುದದು ದುರ್ಲಭವಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.