ವಚನ - 1442     
 
ಜನನ ಮರಣ ದೇಹಧರ್ಮವಲ್ಲದೆ ಜಂಗಮಕ್ಕೆಲ್ಲಿಹದೋ! ಕ್ಷುಧಾ-ತೃಷೆ ಪ್ರಾಣಧರ್ಮವಲ್ಲದೆ ಜಂಗಮಕ್ಕೆಲ್ಲಿಹದೊ! ಸುಖ-ದುಃಖ ಮನೋಧರ್ಮವಲ್ಲದೆ ಜಂಗಮಕ್ಕೆಲ್ಲಿಹದೊ! ಜ್ಞಾನಾಜ್ಞಾನಂಗಳು ಮುಮುಕ್ಷುವಿಂಗಲ್ಲದೆ, ನಿಮ್ಮಲ್ಲಿ ಸಮರಸವಾದ ಸಚ್ಚಿದಾನಂದ ಶಿವಯೋಗಿ ಜಂಗಮಕ್ಕೆಲ್ಲಿಹದೊ, ಕಪಿಲಸಿದ್ಧಮಲ್ಲಿಕಾರ್ಜುನಾ!