ವಚನ - 1470     
 
ರತ್ನಪರೀಕ್ಷೆಯ ಮಾಡುವ ಅಣ್ಣಗಳೆಲ್ಲ ದಿಮ್ಮಿದರಯ್ಯ. ಬಲ್ಲಿದ ಬೆಲೆ ಎಂದೆಡೆ ಹುಲ್ಲುಕಡ್ಡಿಯೊಳೈತೆ; ಬೆಲೆ ಇಲ್ಲದುದೆಂದಡೆ ಬಲ್ಲವರ ಮುಂದುಗೆಡಿಸುತೈತೆ. ಇದರ ಬೆಲೆಯ ಬಲ್ಲ ನಮ್ಮ ಬಸವಣ್ಣನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.