ವಚನ - 1476     
 
ಕುಂಡಲಿ ಬಂದು ಕೀಡಿಯನು ಕುಂಡಲಿಯ ಮಾಡಿತ್ತಯ್ಯಾ. ಅಗ್ನಿ ಬಂದು ಕಾಷ್ಠವ ಅಗ್ನಿಯ ಮಾಡಿತ್ತಯ್ಯಾ. ಮಹೇಶ ಬಂದು ಭಕ್ತನ ಮಹೇಶ ಮಾಡಿ ಗಮಿಸಿದನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.