ವಚನ - 1494     
 
ಕರ್ಮಿಯ ಕರ್ಮ ನಿಷ್ಕರ್ಮವಲ್ಲೆಂದು ನಂಬಬಾರದಯ್ಯಾ. ಮುಮುಕ್ಷುವಿನ ಮೋಕ್ಷ ಮೂರರಲ್ಲೆಂದು ನಂಬಬಾರದಯ್ಯಾ. ಅಭ್ಯಾಸಿಯ ಮೋಕ್ಷ ಜನ್ಮದ್ವಯದಲ್ಲೆಂದು ನಂಬಬಾರದಯ್ಯಾ. ಅನುಭಾವಿಯ ಮೋಕ್ಷ ಜನ್ಮ ಒಂದರಲ್ಲೆಂದು ನಂಬಬಹುದೆ ಅಯ್ಯಾ? ಆರೂಢನ ಜನ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಜನ್ಮವೆಂದು ನಂಬಲೇಬೇಕು, ಹಾವಿನಹಾಳ ಕಲ್ಲಯ್ಯಾ.