ವಚನ - 1510     
 
ಹಣ್ಣ ಹಿಡಿದ ಬಾಲಕಂಗೆ ಬೆಲ್ಲವ ಕೊಟ್ಟೇನು ಹಣ್ಣ ತಾ ಎಂಬಂತೆ, ಮಣ್ಣು ಮೂರನು ಹಿಡಿದ ಭಕ್ತಂಗೆ ಮುಕ್ಕಣ್ಣನ ಪದವಿ ಕೊಟ್ಟೇವೆಂಬ ತೆರನಂತೆ, ಗುರು-ಲಿಂಗ-ಜಂಗಮರು ಬೇಡುವರಲ್ಲದೆ, ತಮ್ಮಿಚ್ಛೆಗೆ ಕೈಯಾನುವರೆ ಕಪಿಲಸಿದ್ಧಮಲ್ಲಿಕಾರ್ಜುನಾ?