ವಚನ - 1556     
 
ವಾಗ್ರಚನೆಯೆಂಬುದು ಕರ್ಣಾಟವಯ್ಯಾ. ಆದ್ಯರಾಜ್ಞೆ ಎಂಬುದು ಈಶ್ವರಗೆ ಜ್ಯೋತಿಯಯ್ಯಾ. ಅಗಿದಗಿದು ನೋಡುವುದದು ಶುಕ ತೆಂಗು ತಿಂದಂತೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.