ವಚನ - 195     
 
ಗುರುವೆಂಬ ತೆತ್ತಿಗನು ಲಿಂಗವೆಂಬಲಗನು ಮನನಿಷ್ಠೆಯೆಂಬ ಕೈಯಲ್ಲಿ ಕೊಡಲು, ಕಾದಿದೆ ಗೆಲಿದೆ ಕಾಮನೆಂಬವನ, ಕ್ರೋಧಾದಿಗಳು ಕೆಟ್ಟು, ವಿಷಯಂಗಳೋಡಿದವು. ಅಲಗು ಎನ್ನೊಳು ನಟ್ಟು ಆನಳಿದ ಕಾರಣ ಚೆನ್ನಮಲ್ಲಿಕಾರ್ಜುನಲಿಂಗವ ಕರದಲ್ಲಿ ಹಿಡಿದೆ.