ವಚನ - 1669     
 
ಕರಿಕೆಯ ಕಂಡು ಪಶುಗಳಾಶ್ರಯಿಸುವವು. ಔತಣ ಕಂಡು ದ್ವಿಜರಾಶ್ರಯಿಸುವರು. ಯುದ್ಧವ ಕಂಡು ಶೂರರಾಶ್ರಯಿಸುವರು. ಸಭೆಯ ಕಂಡು ವಿದ್ವಾಂಸರಾಶ್ರಯಿಸುವರು. ಇವರೆಲ್ಲ ಮಾಯಾಮೂಕರಲ್ಲದೆ ಮಾಯಾರಹಿತರಲ್ಲಯ್ಯಾ. ಕಂಡು ಕಂಡು ಕಣ್ದೆರೆದು ನೋಡದ ಮಹಾಮಹಿಮ ಜಂಗಮನ ಪಾದಕ್ಕೆ ನಮೋ ನಮೋ ಎಂಬೆನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.