ವಚನ - 1772     
 
ನರಜನ್ಮಕ್ಕೊಮ್ಮೆ ಬಂದ ಬಳಿಕ, ಗುರುವಿನ ಕುರುಹ ಕಾಣಬೇಕು. ಗುರುವಿನ ಕುರುಹ ತಾ ಕಂಡ ಬಳಿಕ, ಶಿಷ್ಯನಾಗಿ ಗುರುಕರಜಾತನಾಗಬೇಕು. ಗುರುಕರಜಾತನಾದ ಬಳಿಕ, ಗುರುಸ್ವರೂಪಾಗಿ, ಕಪಿಲಸಿದ್ಧಮಲ್ಲಿಕಾರ್ಜುನನ ಪಾದಪದ್ಮದಲ್ಲಿ ಐಕ್ಯವ ಗಳಿಸಬೇಕು, ಘಟ್ಟಿವಾಳಯ್ಯಾ.