ವಚನ - 1775     
 
ಅರಿದ ಬಳಿಕ ಬ್ರಹ್ಮವೆಂಬುದು ಮೃಗಜಲ ನೋಡಾ. ಅರಿದ ಬಳಿಕ ಬ್ರಹ್ಮವೆಂಬುದು ವಂಧ್ಯಾಪ್ರುತ್ರ ನೋಡಾ. ಅರಿದ ಬಳಿಕ ಬ್ರಹ್ಮವೆಂಬುದು ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಶಬ್ದಮುಗ್ಧ ನೋಡಾ, ಕಲ್ಲಯ್ಯಾ.