ವಚನ - 1856     
 
ಪಂಚವರ್ಣದ ಗಿಳಿಯೊಂದು ಪ್ರಪಂಚರಚನೆಗೆ ಬಂದು. `ಭವ ಬ್ರಹ್ಮ, ಭವ ಬ್ರಹ್ಮ' ಎಂಬುತ್ತಿದೆ, ಆ ಗಿಳಿಯು ಮೂರು ಮನೆಯ ಪಂಜರದಲ್ಲಿ ಕೂತು, `ಕುರುಷ್ವ ಲಿಂಗಪೂಜಾಂ, ಲಿಂಗಪೂಜಾಂ' ಎಂಬುತ್ತಿದೆ. ಆ ಗಿಳಿಯ ವಚನವ ಕೇಳಿದಾತಂಗೆ ಸುಖ, ಗಿಳಿಗೆ ಸುಖ; ಕೇಳದವಂಗೆ ಸುಖವಿಲ್ಲ, ಹೇಳಿದವಂಗೆಯು ಸುಖವಿಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.