ವಚನ - 1929     
 
ಅರಿದಾಚರಿಸುವವನಾಚರಣೆ ಬ್ರಹ್ಮಮಯ. ಅರಿಯದವನಾಚರಣೆ ಮಾಯಾಮಯ. ಅರಿಯಬೇಕು, ಅರಿಯಬೇಕು ಗುರುಮುಖದಿಂದ. ಆರು ಪರಶಿವನೆಂಬುದನರಿಯದವನರಿವು, ಸ್ವಪ್ನದಲ್ಲಿಯ ರತಿಯಂತೆ, ರತಿಯಲ್ಲಿಯ ರಾಜಸುತನಂತೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.