ವಚನ - 235     
 
ದೇಹ ಉಳ್ಳನ್ನಕ್ಕರ ಲಜ್ಜೆ ಬಿಡದು, ಅಹಂಕಾರ ಬಿಡದು. ದೇಹದೊಳಗೆ ಮನ ಉಳ್ಳನ್ನಕ್ಕರ ಅಭಿಮಾನ ಬಿಡದು, ನೆನಹಿನ ವ್ಯಾಪ್ತಿ ಬಿಡದು. ದೇಹ ಮನವೆರಡೂ ಇದ್ದಲ್ಲಿ ಸಂಸಾರ ಬಿಡದು. ಸಂಸಾರವುಳ್ಳಲ್ಲಿ ಭವ ಬೆನ್ನ ಬಿಡದು. ಭವದ ಕುಣಿಕೆಯುಳ್ಳನ್ನಕ್ಕರ ವಿಧಿವಶ ಬಿಡದು. ಚೆನ್ನಮಲ್ಲಿಕಾರ್ಜುನನೊಲಿದ ಶರಣರಿಗೆ ದೇಹವಿಲ್ಲ, ಮನವಿಲ್ಲ, ಅಭಿಮಾನವಿಲ್ಲ ಕಾಣಾ ಮರುಳೆ.