ವಚನ - 238     
 
ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ ಆಗುಮಾಡಬಂದವರಲ್ಲ. ಮನದ ಮೇಲೆ ಬಂದು ನಿಂದು ಜರೆದು ನುಡಿದು ಪಥವ ತೋರಬಲ್ಲಡಾತನೆ ಸಂಬಂಧಿ. ಹಾಗಲ್ಲದೆ ಅವರಿಚ್ಚೆಯ ನುಡಿದು ತನ್ನುದರವ ಹೊರೆವ ಬಚ್ಚಣಿಗಳ ಮಚ್ಚುವನೆ ಚೆನ್ನಮಲ್ಲಿಕಾರ್ಜುನ.