ವಚನ - 251     
 
ನಾಳದ ಮರೆಯ ನಾಚಿಕೆ, ನೂಲಮರೆಯಲ್ಲಿ ಅಡಗಿತ್ತೆಂದು ಅಂಜುವರು, ಅಳುಕುವರು. ಮನ ಮೆಚ್ಚಿದಭಿಮಾನಕ್ಕೆ ಆವುದು ಮರೆ ಹೇಳಾ? ಕಾಯ ಮಣ್ಣೆಂದು ಕಳೆದ ಬಳಿಕ, ದೇಹದಭಿಮಾನ ಅಲ್ಲಿಯೇ ಹೋಯಿತ್ತು. ಪ್ರಾಣ ಬಯಲೆಂದು ಕಳೆದ ಬಳಿಕ, ಮನದ ಲಜ್ಜೆಯಲ್ಲಿಯೆ ಹೋಯಿತ್ತು. ಚೆನ್ನಮಲ್ಲಿಕಾರ್ಜುನನ ಕೂಡಿ ಲಜ್ಜೆಗೆಟ್ಟವಳ ಉಡಿಗೆಯ ಸೆಳೆದುಕೊಂಡಡೆ, ಮುಚ್ಚಿದ ಸೀರೆ ಹೋದರೆ ಅಂಜುವರೆ ಮರುಳೆ.?