ವಚನ - 254     
 
ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ? ಸುರಾಳನಿರಾಳಂಗೆ ಮಜ್ಜನದ ಹಂಗೇತಕ್ಕೆ? ಸ್ವಯಂಜ್ಯೋತಿರ್ಮಯಂಗೆ ದೀಪಾರಾಧನೆಯ ಹಂಗೇತಕ್ಕೆ? ಸುವಾಸನೆ ಸೂಕ್ಷ್ಮಗಂಧ ಕರ್ಪೂರಗೌರಂಗೆ ಪುಷ್ಪದ ಹಂಗೇತಕ್ಕೆ? ಮಾಟದಲ್ಲಿ ಮನ ನಂಬುಗೆಯಿಲ್ಲದ, ಅಹಂಕಾರಕ್ಕೀಡಾದ, ಭಕ್ತಿಯೆಂಬ ಪಸಾರವನಿಕ್ಕಿ ಹೊಲೆಹದಿನೆಂಟುಜನ್ಮವ ಹೊರೆವುದರಿಂದ ಅಂಗೈಯಲೊರಸಿ ಮುಕ್ತಿಯ ಮೂಲ ಶಿಖಿರಂಧ್ರದ ಕಾಮನ ಸುಟ್ಟು ಶುದ್ಧಸ್ಫಟಿಕ ಸ್ವಯಂಜ್ಯೋತಿಯನು ಸುನಾಳದಿಂದ ಹಂ ಕ್ಷಂ ಎಂಬೆರಡಕ್ಷರವ ಸ್ವಯಾನುಭಾವಭಕ್ತಿ ನಿರ್ವಾಣವಾದವರನೆನಗೊಮ್ಮೆ ತೋರಾ. ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.