ವಚನ - 187     
 
ಭಾನು ಶಶಿ ಕಳೆಗುಂದಿ, ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂಬ ನಾಗ ಕೂರ್ಮ ಕೃಕರ ದೇವದತ್ತ ಧನಂಜಯವೆಂಬ- ವಾಯುವನರಿಯವೊ! ಆದಿಪ್ರಣಮವನರಿದಹೆನೆಂಬವಂಗೆ, ಬಯಲು ಆಕಾಶದೊಳಗೊಂದು ರಸದ ಬಾವಿ! ಮುನ್ನಾದವರೆಲ್ಲಿಯವರೆಂದೆನಬೇಡ ಗುಹೇಶ್ವರನೆಂಬ ಲಿಂಗವು ತಾನೆ ಕಂಡೆಲವೊ!