ವಚನ - 270     
 
ಪಂಚೇಂದ್ರಿಯದ ಉರವಣೆಯ ಉದುಮದದ ಭರದ ಜವ್ವನದೊಡಲು ವೃಥಾ ಹೋಯಿತ್ತಲ್ಲಾ! ತುಂಬಿ ಪರಿಮಳವ ಕೊಂಡು ಲಂಬಿಸುವ ತೆರನಂತೆ ಇನ್ನೆಂದಿಂಗೆ ಒಳಕೊಂಬೆಯೊ, ಅಯ್ಯಾ ಚೆನ್ನಮಲ್ಲಿಕಾರ್ಜುನಾ?