ವಚನ - 189     
 
ಆಧಾರ ಸ್ವಾದ್ಥಿಷ್ಠಾನ ಮಣಿಪೂರಕಸ್ಥಾನವರಿಯರು. ಅಷ್ಟದಳ ಕಮಲದಲ್ಲಿ ಸೂಕ್ಮ ನಾಳವೈದುವದೆ? ಇನ್ನೇನನರಿವರಾರೊ? ಬೇರೆ ಮತ್ತೆ ಅರಿಯಲುಂಟೆ ಹೇಳಾ? ಸಹಸ್ರದಳಕಮಲದ ಬ್ರಹ್ಮರಂಧ್ರದಲ್ಲಿಪ್ಪ ಅಮೃತಸ್ವರವನರಿದು, ಹಿಡಿದುಕೊಂಬುದು, ಅರಿದು!-ಗುಹೇಶ್ವರಾ.