ವಚನ - 288     
 
ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರು. ಒಬ್ಬ ಭಾವರೂಪ, ಒಬ್ಬ ಪ್ರಾಣರೂಪ; ಒಬ್ಬ ಐಮುಖವಾಗಿ ಕಾಯ ರೂಪಾದ; ಇಬ್ಬರು ಉತ್ಪತ್ತಿ ಸ್ಥಿತಿಗೆ ಕಾರಣವಾದರು. ಐಮುಖನರಮನೆ ಸುಖವಿಲ್ಲೆಂದು ಕೈಲಾಸವ ಹೊಗೆನು, ಮರ್ತ್ಯಕ್ಕೆ ಅಡಿ ಇಡೆನು; ಚೆನ್ನಮಲ್ಲಿಕಾರ್ಜುನದೇವಾ, ನೀನೇ ಸಾಕ್ಷಿ.