ವಚನ - 297     
 
ಬಾರದ ಭವಂಗಳಲ್ಲಿ ಬಂದೆನಯ್ಯಾ. ಕಡೆಯಿಲ್ಲದ ತಾಪಂಗಳಲ್ಲಿ ನೊಂದು ನಿಮ್ಮ ಕರುಣೆಗೆ ಬಳಿಸಂದೆನಯ್ಯಾ. ಇದು ಕಾರಣ ಎನ್ನ ದೇವ ಚೆನ್ನಮಲ್ಲಿಕಾರ್ಜುನಂಗೆ ತನುವನುವಾಗಿ ಮನಮಾರುವೋಗೆ ಮತ್ತಿಲ್ಲದ ತವಕದ ಸ್ನೇಹಕ್ಕೆ ತೆರಹಿನ್ನೆಂತು ಹೇಳಾ ತಂದೆ?