ವಚನ - 306     
 
ಭಕ್ತೆಯಾನಪ್ಪೆನಯ್ಯಾ; ಕರ್ತೃಭೃತ್ಯವ ನಾನರಿಯೆ. ಮಾಹೇಶ್ವರಿಯಾನಪ್ಪೆನಯ್ಯಾ; ವ್ರತ ನೇಮ ಛಲವ ನಾನರಿಯೆ. ಪ್ರಸಾದಿಯಾನಪ್ಪೆನಯ್ಯಾ; ಅರ್ಪಿತನರ್ಪಿತವೆಂಬ ಭೇದವ ನಾನರಿಯೆ. ಪ್ರಾಣಲಿಂಗಿಯಾನಪ್ಪೆನಯ್ಯಾ; ಅನುಭಾವದ ಗಮನವ ನಾನರಿಯೆ. ಶರಣೆಯಾನಪ್ಪೆನಯ್ಯಾ;ಶರಣಸತಿ ಲಿಂಗಪತಿ ಎಂಬ ಭಾವವ ನಾನರಿಯೆ. ಐಕ್ಯಳಾನಪ್ಪೆನಯ್ಯಾ; ಬೆರಸಿ ಭೇದವ ನಾನರಿಯೆ. ಚೆನ್ನಮಲ್ಲಿಕಾರ್ಜುನಯ್ಯಾ, ಷಟ್‍ಸ್ಥಲದಲ್ಲಿ ನಿಃಸ್ಥಲವಾಗಿಪ್ಪೆನು.