ವಚನ - 314     
 
ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು, ಇದೇ ಕರ್ತೃ ಭೃತ್ಯರ ಭೇದ. ಲಿಂಗಭಕ್ತನಾದಡೆ ಜಂಗಮಪಾದತೀರ್ಥಪ್ರಸಾದವ ಲಿಂಗಕ್ಕೆ ಮಜ್ಜನ ಭೋಜನ ನೈವೇದ್ಯವ ಮಾಡಿ, ಪ್ರಸಾದವ ಕೊಳ್ಳಬೇಕು. ಇದೇ ವರ್ಮ, ಇದೇ ಧರ್ಮ ಕಾಣಾ ಚೆನ್ನಮಲ್ಲಿಕಾರ್ಜುನಾ.