ವಚನ - 324     
 
ಮರಮರ ಮಥನಿಸಿ ಕಿಚ್ಚು ಹುಟ್ಟಿ ಸುತ್ತಣ ತರುಮರಾದಿಗಳ ಸುಡಲಾಯಿತ್ತು. ಆತ್ಮ ಆತ್ಮ ಮಥನಿಸಿ ಅನುಭಾವ ಹುಟ್ಟಿ ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು. ಇಂತಪ್ಪ ಅನುಭಾವರ ಅನುಭಾವವ ತೋರಿ ಎನ್ನ ಒಡಲನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.