ವಚನ - 337     
 
ಮುತ್ತು ನೀರಲಾಯಿತ್ತು, ವಾರಿಕಲ್ಲು ನೀರಲಾಯಿತ್ತು, ಉಪ್ಪು ನೀರಲಾಯಿತ್ತು. ಉಪ್ಪು ಕರಗಿತ್ತು, ವಾರಿಕಲ್ಲು ಕರಗಿತ್ತು, ಮುತ್ತು ಕರಗಿದುದನಾರೂ ಕಂಡವರಿಲ್ಲ. ಈ ಸಂಸಾರಿಮಾನವರು ಲಿಂಗವಮುಟ್ಟಿ ಭವಭಾರಿಗಳಾದರು. ನಾ ನಿಮ್ಮಮುಟ್ಟಿ ಕರಿಗೊಂಡೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.