ವಚನ - 345     
 
ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು, ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ, ಅಲ್ಲಅಹುದು, ಉಂಟುಇಲ್ಲ, ಬೇಕುಬೇಡೆಂಬ ಆರರಿತಾತನೆ ಗುರು ತಾನೆ ಬೇರಿಲ್ಲ. ದ್ವಯಕಮಳದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.