ವಚನ - 377     
 
ಸಂಗದಿಂದಲ್ಲದೆ ಅಗ್ನಿ ಹುಟ್ಟದು, ಸಂಗದಿಂದಲ್ಲದೆ ಬೀಜ ಮೊಳೆದೋರದು, ಸಂಗದಿಂದಲ್ಲದೆ ಹೂವಾಗದು. ಸಂಗದಿಂದಲ್ಲದೆ ಸರ್ವಸುಖದೋರದು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.