ವಚನ - 201     
 
ಆಧಾರದಲ್ಲಿ ಬ್ರಹ್ಮ ಸ್ವಾಯತವಾದ, ಸ್ವಾದಿಷ್ಠಾನದಲ್ಲಿ ವಿಷ್ಣು ಸ್ವಾಯತವಾದ. ಮಣಿಪೂರಕದಲ್ಲಿ ರುದ್ರ ಸ್ವಾಯತವಾದ, ಅನಾಹತದಲ್ಲಿ ಈಶ್ವರ ಸ್ವಾಯತವಾದ. ವಿಶುದ್ಧಿಯಲ್ಲಿ ಸದಾಶಿವ ಸ್ವಾಯತವಾದ, ಆಜ್ಞೆಯಲ್ಲಿ ಉಪಮಾತೀತ ಸ್ವಾಯತವಾದ. ಇವರೆಲ್ಲರು ಬಯಲಲ್ಲಿ ಹುಟ್ಟಿ, ಬಯಲಲ್ಲಿ ಬೆಳೆದು, ಬಯಲಲಿಂಗವನೆ ಧರಿಸಿಕೊಂಡು, ಬಯಲನೆ ಆರಾಧಿಸಿ, ಬಯಲಾಗಿ ಹೋಯಿತ್ತ ಕಂಡೆ ಗುಹೇಶ್ವರಾ.