ವಚನ - 399     
 
ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು, ಪ್ರಜ್ವಲಿಸಿ ತೊಳತೊಳಗಿ ಬೆಳಗುತ್ತಿಹ ಕಾಂತಿಯೊಳು ಪ್ರಜ್ವಲಿಸಿ, ದೃಷ್ಟಿನಟ್ಟು ಒಜ್ಜರಿಸಿ ಸುರಿವ ಅಶ್ರುಜಲ ಶಿವಸುಖ ಸಾರಾಯನಲ್ಲಿ ಸಜ್ಜನಸತಿಯ ರತಿಯೊಡಗೂಡಿ ಲಜ್ಜೆಗೆಟ್ಟು ನಿಮ್ಮ ನೆರೆದೆನು ಚೆನ್ನಮಲ್ಲಿಕಾರ್ಜುನಾ.