ವಚನ - 407     
 
ಹರನೆ ನೀನೆನಗೆ ಗಂಡನಾಗಬೇಕೆಂದು ಅನಂತಕಾಲ ತಪಸ್ಸಿದ್ದೆ ನೋಡಾ. ಹಸೆಯ ಮೇಲಣ ಮಾತ ಬೆಸಗೊಳಲಟ್ಟಿದಡೆ ಶಶಿಧರನ ಹತ್ತಿರಕೆ ಕಳುಹಿದರೆಮ್ಮವರು, ಭಸ್ಮವನೆ ಹೂಸಿ, ಕಂಕಣವನೆ ಕಟ್ಟಿದರು ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದ.