ವಚನ - 425     
 
ಹೂವು ಕಂದಿದಲ್ಲಿ ಪರಿಮಳವನರಸುವರೆ? ಕಂದನಲ್ಲಿ ಕುಂದನರಸುವರೆ? ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೆ? ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೆ? ಕೇಳಯ್ಯಾ, ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ ಹೊಳೆಯಿಳಿದ ಬಳಿಕ ಅಂಬಿಗಂಗೇನುಂಟು?