ವಚನ - 217     
 
ಸೃಷ್ಟಿಯ ಮೇಲಣ ಕಣಿಯ ತಂದು, ಅಷ್ಟತನುವಿನ ಕೈಯಲ್ಲಿ ಕೊಡಲು, ಅಷ್ಟತನು ತಪ್ಪಿ ಸೃಷ್ಟಿಯ ಮೇಲೆ ಬಿದ್ದಡೆ-ಕೆಟ್ಟನಲ್ಲಾ, ಅನಾಚಾರಿಯೆಂದು ಮುಟ್ಟರು ನೋಡಾ, ಮುಟ್ಟದ ಭೇದವನು, ವಿಖಂಡಿಸಿದ ಭಾವವನು; ಭಾವವ್ರತಗೇಡಿಗಳು ತಾವೆತ್ತ ಬಲ್ಲರು ಗುಹೇಶ್ವರಾ?